ಕೊಟ್ಟಗೇರಿಯಲ್ಲಿ ಮಣ್ಣು ಪರೀಕ್ಷಾ ಅಭಿಯಾನ

ಗೋಣಿಕೊಪ್ಪಲು ಕಾಫಿ ಮಂಡಳಿ ವಿಸ್ತರಣಾ ವಿಭಾಗ ಹಾಗೂ ಕೊಟ್ಟಗೇರಿ ಲಕ್ಷ್ಮಣತೀರ್ಥ ಸಂಘದ ವತಿಯಿಂದ ಬಾಳೆಲೆ ಹೋಬಳಿ ವ್ಯಾಪ್ತಿಯ ಕಾಫಿ ಬೆಳೆಗಾರರಿಗೆ ಫೆ.29 ರಂದು ಮಣ್ಣು ಪರೀಕ್ಷೆ ಅಭಿಯಾನ ಮತ್ತು ಕಾಫಿ ಬೆಳೆಯ ಬಗ್ಗೆ ತಾಂತ್ರಿಕ ಮಾಹಿತಿ ನೀಡುವ ಕಾರ್ಯಾಗಾರ ನಡೆಯಲಿದೆ.

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

ಅಂದು ಬೆಳಗ್ಗೆ 9.45ಗಂಟೆಗೆ ಕೊಟ್ಟಗೇರಿ ಸಮುದಾಯ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಬಾಳೆಲೆ ಹೋಬಳಿ ವ್ಯಾಪ್ತಿಯ ಕಾಫಿ ಬೆಳೆಗಾರರು ತಮ್ಮ ತೋಟದ ಮಣ್ಣಿನ ಮಾದರಿಯನ್ನು ಕಾಫಿ ಮಂಡಳಿ ಶಿಫಾರಸು ಮಾಡಿದ ರೀತಿಯಲ್ಲಿ ಮಣ್ಣಿನ ಮಾದರಿಯ ಸಂಗ್ರಹಣೆಯನ್ನು ತಂದು ಅ ದಿನವೇ ಫಲಿತಾಂಶವನ್ನು ಪಡೆದುಕೊಳ್ಳಲು ಮನವಿ ಮಾಡಿದ್ದಾರೆ.

ಮಣ್ಣಿನ ಪರೀಕ್ಷೆ ಮಾಡಿಸಿ ಕೊಳ್ಳಲು ಬೆಳೆಗಾರರು ಬೆಳಿಗ್ಗೆ 9.45ಗಂಟೆಗೆ ಹಾಜರಿರತಕ್ಕದ್ದು, ಮಣ್ಣಿನ ರಸಸಾರ ಪರೀಕ್ಷೆಗೆ ರೂ.25, ಸಾರಜನಕ, ರಂಜಕ, ಪೊಟ್ಯಾಶ್ ಪರೀಕ್ಷೆಗೆ ರೂ.150 ಪಾವತಿಸತಕ್ಕದ್ದು, ಇದರ ಜೊತೆಗೆ ನುರಿತ ತಜ್ಞರಿಂದ ಕಾಫಿ ಬೇಸಾಯದ ಬಗ್ಗೆ ವಿಶೇಷ ಮಾಹಿತಿಯನ್ನು ನೀಡಲಾಗುವುದೆಂದು ಕೊಟ್ಟಗೇರಿ ಲಕ್ಷ್ಮಣತೀರ್ಥ ಸಂಘದ ಅಧ್ಯಕ್ಷರು ಹಾಗೂ ಗೋಣಿಕೊಪ್ಪಲು ಕಾಫಿ ಮಂಡಳಿ ಸಂಪರ್ಕ ಅಧಿಕಾರಿ ಡಿ.ಎಸ್.ಮುಖಾರಿಬ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About ಸರ್ಚ್‌ ಕೂರ್ಗ್‌ ಮೀಡಿಯಾ

"ಸರ್ಚ್‌ ಕೂರ್ಗ್‌ ಮೀಡಿಯಾ" ವಿಶ್ಲೇಷಣಾತ್ಮಕ ಪತ್ರಿಕೋದ್ಯಮದಲ್ಲಿ‌ ಕೃಷಿ, ಸಹಕಾರ, ಪರಿಸರ, ವಿಜ್ಞಾನ ಮತ್ತು ಗ್ರಾಮೀಣ ಜೀವನವನ್ನು ಕೇಂದ್ರೀಕರಿಸುವ ಆನ್‌ಲೈನ್‌ ಮಾಧ್ಯಮವಾಗಿ ಅಸಂಖ್ಯ ಚಂದಾದಾರರೊಂದಿಗೆ, ಅತಿದೊಡ್ಡ ಹಾಗೂ ಅತಿ ವಿಸ್ತಾರವಾದ ಕೊಡಗಿನ ಜನಪ್ರಿಯ ಮಾಧ್ಯಮವಾಗಿದೆ. www.searchcoorg.com  ಹಾಗೂ Search Coorg App ಮುಖಾಂತರ ಕಾರ್ಯನಿರ್ವಹಿಸುತ್ತಿದೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments