ಶನಿವಾರಸಂತೆ: ಶಾದಿ ಭಾಗ್ಯ, ಟಿಪ್ಪು ಜಯಂತಿಗಳು ಬೇಕೆಂದು ಯಾರೂ ಕೇಳಿರಲಿಲ್ಲ, ಅವು ಅಂದಿನ ಕಾಂಗ್ರೆಸ್ ಸರ್ಕಾರದ ಒಡೆದಾಳುವ ನೀತಿಯ ತಂತ್ರಗಳಾಗಿದ್ದವು ಎಂದು ಮಡಿಕೇರಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಎಂ. ಪಿ. ಅಪ್ಪಚ್ಚು ರಂಜನ್ ಹೇಳಿದ್ದಾರೆ.
ಶಾದಿ ಭಾಗ್ಯ ಕೆಟ್ಟ ಯೋಜನೆ ಎಂದು ಹೇಳುತ್ತಿಲ್ಲ. ಆದರೆ ಅದರ ಅಗತ್ಯವೇ ಇರಲಿಲ್ಲ. ಯೋಜನೆಗೆ ಭಾರೀ ಪ್ರಚಾರ ಕೊಡಲಾಯಿತೇ ವಿನಃ ಫಲಾನುಭವಿಗಳ ಸಂಖ್ಯೆ ತೀರಾ ಕಡಿಮೆ ಎಂದು ಅಪ್ಪಚ್ಚು ರಂಜನ್ ಪಟ್ಟಣದಲ್ಲಿ ಶನಿವಾರ ಬೆಳಿಗ್ಗೆ ಆಯೋಜಿಸಲಾಗಿದ್ದ ಪ್ರಚಾರ ಸಭೆಯಲ್ಲಿ ಹೇಳಿದರು. ಶಾದಿ ಭಾಗ್ಯ ಅಲ್ಪಸಂಖ್ಯಾತ ಹೆಣ್ಣುಮಕ್ಕಳಿಗೆ ಮಾತ್ರ ಎಂಬುದು ಸಮುದಾಯಗಳ ನಡುವೆ ಕಂದಕ ಸೃಷ್ಟಿಸಿತೇ ವಿನಃ, ಅದರಿಂದ ಆದ ಉಪಯೋಗ ಅಷ್ಟರಲ್ಲೇ ಇದೆ ಎಂದರು.
ಟಿಪ್ಪು ಜಯಂತಿ ಸೃಷ್ಟಿಸಿದ ಅನಾಹುತ ಎಲ್ಲರಿಗೂ ಗೊತ್ತೇ ಇದೆ, ವಿವರಿಸಿ ಹೇಳುವ ಅಗತ್ಯವಿಲ್ಲ ಎಂದ ಅಪ್ಪಚ್ಚು ರಂಜನ್ ಜನತಂತ್ರದಲ್ಲಿ ಜನರಿಗೆ ಬೇಡದ ವಿಷಯಗಳನ್ನು ಅವರ ಮೇಲೆ ಹೇರಲಾಗುವುದಿಲ್ಲ ಎಂದರು.
ಮಾಜಿ ವಿಧಾನ ಪರಿಷತ್ ಸದಸ್ಯ ಎಸ್. ಜಿ. ಮೇದಪ್ಪ ಸೇರಿದಂತೆ ಹಲವಾರು ಬಿಜೆಪಿ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು
Author Profile
- Coorg's Largest Network
-
"ಸರ್ಚ್ ಕೂರ್ಗ್ ಮೀಡಿಯಾ" ವಿಶ್ಲೇಷಣಾತ್ಮಕ ಪತ್ರಿಕೋದ್ಯಮದಲ್ಲಿ ಕೃಷಿ, ಸಹಕಾರ, ಪರಿಸರ, ವಿಜ್ಞಾನ ಮತ್ತು ಗ್ರಾಮೀಣ ಜೀವನವನ್ನು ಕೇಂದ್ರೀಕರಿಸುವ ಆನ್ಲೈನ್ ಮಾಧ್ಯಮವಾಗಿ ಅಸಂಖ್ಯ ಚಂದಾದಾರರೊಂದಿಗೆ, ಅತಿದೊಡ್ಡ ಹಾಗೂ ಅತಿ ವಿಸ್ತಾರವಾದ ಕೊಡಗಿನ ಜನಪ್ರಿಯ ಮಾಧ್ಯಮವಾಗಿದೆ.
www.searchcoorg.com ಹಾಗೂ Search Coorg App ಮುಖಾಂತರ ಕಾರ್ಯನಿರ್ವಹಿಸುತ್ತಿದೆ.
Latest News
ಪೊನ್ನಂಪೇಟೆNovember 30, 2023ಕೊಡಗಿನ ಮಂದ್ ಮಾನಿಗಳನ್ನು ಉಳಿಸಿ ಬೆಳೆಸಲು ಸಂಸದೆ ತೇಜಸ್ವಿನಿ ಗೌಡ ಕರೆ
ಮಡಿಕೇರಿNovember 30, 2023ಮಡಿಕೇರಿ ನಗರದ ವಿವಿಧ ವಾರ್ಡ್ಗಳಿಗೆ ಶಾಸಕ ಡಾ. ಮಂತರ್ ಗೌಡ ಭೇಟಿ
ಕೆದಮುಳ್ಳೂರುNovember 28, 202345 ವರ್ಷದ ಬಳಿಕ ಮುಲ್ಲೈರೀರ ಕುಟುಂಬದ ಮಂದ್ನಲ್ಲಿ ನಡೆದ ಪುತ್ತರಿ ಕೋಲಾಟ
ಪೊನ್ನಂಪೇಟೆNovember 25, 2023ಡಿ-3ರಂದು ಇತಿಹಾಸ ಪ್ರಸಿದ್ಧದ ಮೂರು ನಾಡಿನ “ಕೈಮುಡಿಕೆ” ಪುತ್ತರಿ ಕೋಲ್ ಮಂದ್