ಸುಂಟಿಕೊಪ್ಪದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ

*ಪತ್ರಿಕೆಗಳು ಸಮಾಜದ ಮುಖವಾಣಿಯಾಗಿ ಕೆಲಸ ಮಾಡಬೇಕು : ಸಾಯಿ ಕುಮಾರ್
*ಪತ್ರಿಕಾ ದಿನಾಚರಣೆ ಪ್ರಯುಕ್ತ : ಹಿರಿಯ ಪತ್ರಕರ್ತರಿಗೆ ಸನ್ಮಾನ

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

ಸುಂಟಿಕೊಪ್ಪ : ಪತ್ರಿಕೆಗಳು ಸಮಾಜದ ಮುಖವಾಣಿಯಾಗಿ ಸಮಾಜದ ಅಂಕುಡೊಂಕುಗಳನ್ನು ತಿದ್ದಿ ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಬೇಕೆಂದು ಪತ್ರಕರ್ತರಿಗೆ ರಾಜ್ಯ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷ ಟಿ.ಕೆ. ಸಾಯಿ ಕುಮಾರ್ ಸಲಹೆ ನೀಡಿದ್ದಾರೆ.
ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದ ವತಿಯಿಂದ ಸುಂಟಿಕೊಪ್ಪದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪತ್ರಿಕೆಗಳಿಂದ ದೈನಂದಿನ ಆಗುಹೋಗುಗಳನ್ನು ತಿಳಿದುಕೊಳ್ಳಲು ಸಹಕಾರಿಯಾಗಿದೆ. ಸಂಕ್ಷಿಪ್ತವಾಗಿ ಪತ್ರಿಕಾ ದಿನಾಚರಣೆಯ ಇತಿಹಾಸವನ್ನು ಸ್ಮರಿಸಿದ ಅವರು ಪತ್ರಿಕೆಗಳು ಸದಾ ಕಾಲವೂ ಸಮಾಜಕ್ಕೆ ಪ್ರತಿಸ್ಪಂದಿಸುವ ಕೆಲಸವನ್ನು ಮಾಡುತ್ತಲೇ ಬಂದಿರುವುದನ್ನು ಕಾರಣಬಹುದಾಗಿದೆ. ಇಂದಿನ ಮಕ್ಕಳು ಪತ್ರಿಕೆಗಳನ್ನು ಓದುವ ಮೂಲಕ ಜ್ಞಾನ ಹೆಚ್ಚಿಸಿಕೊಳ್ಳಬೇಕೆಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ತಮ್ಮ ತಂದೆ ಮತ್ತು ತಾಯಿ ಹೆಸರಿನಲ್ಲಿ ಕುಶಾಲನಗರ ತಾಲೂಕು ಪತ್ರಕರ್ತರ ಸಂಘಕ್ಕೆ ದತ್ತಿನಿಧಿ ಘೋಷಣೆ ಮಾಡಿದರು.
ಮುಖ್ಯ ಭಾಷಣಕಾರಾಗಿ ಕೊಡಗು ಪತ್ರಕರ್ತರ ಸಂಘದ ಗೌರವ ಸಲಹೆಗಾರರಾದ ಶ್ರೀಧರ್ ನೆಲ್ಲಿತ್ತಾಯ ಮಾತನಾಡಿ ಪತ್ರಿಕೋದ್ಯಮ ಇಂದು ಪತ್ರಿಕಾ ವಾಣಿಜ್ಯೋದ್ಯಮವಾಗಿ ಬದಲಾಗಿದೆ. ಜನರು ಅಪರಾಧ ಮತ್ತು ಅಪಘಾತದ ಸುದ್ದಿಗಳನ್ನು ಮುಖಪುಟದಲ್ಲಿ ಓದಲು ಬಯಸುತ್ತಾರೆ ಎಂಬ ವಿಷಯಗಳು ಕಳವಳಕಾರಿಯಾಗಿದೆ. ಹಣ ಒಳ್ಳೆಯವರ ಹಿಂದೆ ಹೋಗುತ್ತಿಲ್ಲ. ಒಳ್ಳೆಯವರು ಹಣದ ಹಿಂದೆ ಹೋಗಲು ಸಾಧ್ಯವಿಲ್ಲ. ಹೀಗಾಗಿ ಸಾಮಾಜಿಕ ಬದಲಾವಣೆ ಮತ್ತು ಸುಧಾರಣೆಗಳನ್ನು ಮಾಡಲು ಬಯಸುವವರು ಪತ್ರಿಕೋದ್ಯಮದ ಮೂಲಕ ಏನನ್ನೂ ಸಾಧಿಸಲು ಅಸಾಧ್ಯವಾದಂತೆ ಕಾಲಘಟ್ಟದಲ್ಲಿ ನಾವಿದ್ದೇವೆ ಎಂದು ಮಾರ್ಮಿಕವಾಗಿ ನುಡಿಸಿದರು.
ಕೊಡಗು ಪತ್ರಿಕೋದ್ಯಮದ ಒಂದು ವಿಹಂಗಮ ನೋಟ ನೀಡಿದ ಅವರು, ಅನೇಕ ಪತ್ರಿಕೆ ಹುಟ್ಟು ಹಾಗೂ ಏಳುಬೀಳುಗಳನ್ನು ಅನುಭವದ ಹಿನ್ನೆಲೆಯಲ್ಲಿ ವಿವರಿಸಿದರು. ಕೊಡಗಿನಲ್ಲಿ ಕೂಡ ದೃಶ್ಯ ಮಾಧ್ಯಮಗಳ ಹುಟ್ಟು, ಬೆಳವಣಿಗೆ ಹಾಗೂ ಪ್ರಭಾವಗಳ ಕುರಿತು ಮಾತನಾಡಿದ ಅವರು ಪ್ರಸ್ತುತ ಜನಪ್ರಿಯವಾಗಿರುವ ಮೊಬೈಲ್ ಪತ್ರಿಕೋದ್ಯಮ ಮತ್ತು ಆನ್ಲೈನ್ ಪತ್ರಿಕೋದ್ಯಮದ ಬೆಳಕು ಚೆಲ್ಲಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತಿರಿದ್ದ ಕೊಡಗು ಪತ್ರಕರ್ತರ ಸಂಘದ ಗೌರವ ಸಲಹೆಗಾರರಾದ ಟಿ.ಪಿ. ರಮೇಶ್ ಮಾತನಾಡಿ ಕೊಡಗಿನಲ್ಲಿ 58ಕ್ಕೂ ಹೆಚ್ಚು ಪತ್ರಿಕೆಗಳು ಬೆಳಕು ಕಂಡಿದ್ದು, ಕೇವಲ ನಾಲ್ಕರಿಂದ ಐದು ಮಾತ್ರ ಇಂದಿಗೂ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಕಾಲಘಟ್ಟದಲ್ಲಿ ಪತ್ರಿಕೋದ್ಯಮದಲ್ಲಿ ಕೆಲಸ ನಿರ್ವಹಿಸುವುದು ಎಷ್ಟು ಕಷ್ಟ ಎಂಬುದನ್ನು ವಿವರಿಸಿದರು.
ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಮಾತನಾಡಿ ಪತ್ರಿಕೆಗಳಿಂದ ಗ್ರಾಮೀಣ, ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳು ಮಾತ್ರವಲ್ಲದೆ ಕ್ರೀಡೆ, ಕೃಷಿ, ಆರೋಗ್ಯ, ಶಿಕ್ಷಣ, ಪರಿಸರ, ವ್ಯಕ್ತಿತ್ವ ವಿಕಸನ, ಸ್ಪರ್ಧಾತ್ಮಕ ವಿಷಯಗಳಿಗೆ ತಯಾರಿ ಸೇರಿದಂತೆ ಹಲವು ವಿಷಯಗಳ ಕುರಿತು ಮಾಹಿತಿ ಲಭ್ಯವಾಗುತ್ತದೆ. ನಮ್ಮ ಸಂಘದ ಧ್ಯೇಯೋದೇಶಗಳÀಲ್ಲಿ ಅಭಿವೃದ್ಧಿ ಪತ್ರಿಕೋದ್ಯಮವನ್ನು ಮುಖ್ಯವಾಗಿ ಇಟ್ಟುಕೊಂಡು ಕೃಷಿಗೆ ಪೂರಕವಾದ ವಿಷಯಗಳನ್ನು ಹೆಚ್ಚು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಮುಂದುವರೆಯುತ್ತಿದ್ದು, ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ. ಮುರುಳೀಧರ್, ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಪಿ.ಎಸ್. ಜಾನ್, ಮಾತನಾಡಿದರು.
ಪತ್ರಿಕಾ ದಿನಾಚರಣೆ ಅಂಗವಾಗಿ ತಾಲೂಕಿನ ಹಿರಿಯ ಪತ್ರಕರ್ತರಾದ ಕೆ.ಎಚ್.ಶಿವಣ್ಣ, ಕೆ.ತಿಮ್ಮಪ್ಪ, ಬಿ.ಸಿ. ದಿನೇಶ್ ಹಾಗೂ ಕೊಡಗು ಪತ್ರಕರ್ತರ ಸಂಘದ ಪ್ರಶಸ್ತಿಗೆ ಭಾಜನರಾದ ವಿಘ್ನೇಶ್ ಭೂತನಕಾಡು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದ ಮೊದಲಿಗೆ ವನಮಹೋತ್ಸವದ ಅಂಗವಾಗಿ ಕಾಲೇಜಿನ ಆವರಣದಲ್ಲಿ ಬೆಣ್ಣೆಹಣ್ಣಿನ ಗಿಡವನ್ನು ನೆಡಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಸಂಘದ ಸಿಲ್ವೆಸ್ಟರ್ ಡಿಸೋಜ ಸ್ವಾಗತಿಸಿ, ಕೆ.ತಿಮ್ಮಪ್ಪ ನಿರೂಪಿಸಿ, ನವೀನ್ ವಂದಿಸಿದರು.

About ಸರ್ಚ್‌ ಕೂರ್ಗ್‌ ಮೀಡಿಯಾ

"ಸರ್ಚ್‌ ಕೂರ್ಗ್‌ ಮೀಡಿಯಾ" ವಿಶ್ಲೇಷಣಾತ್ಮಕ ಪತ್ರಿಕೋದ್ಯಮದಲ್ಲಿ‌ ಕೃಷಿ, ಸಹಕಾರ, ಪರಿಸರ, ವಿಜ್ಞಾನ ಮತ್ತು ಗ್ರಾಮೀಣ ಜೀವನವನ್ನು ಕೇಂದ್ರೀಕರಿಸುವ ಆನ್‌ಲೈನ್‌ ಮಾಧ್ಯಮವಾಗಿ ಅಸಂಖ್ಯ ಚಂದಾದಾರರೊಂದಿಗೆ, ಅತಿದೊಡ್ಡ ಹಾಗೂ ಅತಿ ವಿಸ್ತಾರವಾದ ಕೊಡಗಿನ ಜನಪ್ರಿಯ ಮಾಧ್ಯಮವಾಗಿದೆ. www.searchcoorg.com  ಹಾಗೂ Search Coorg App ಮುಖಾಂತರ ಕಾರ್ಯನಿರ್ವಹಿಸುತ್ತಿದೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments