ಜನರಲ್ ಕೆ.ಎಸ್. ತಿಮ್ಮಯ್ಯ ವೃತ್ತದಲ್ಲಿ ಕೂಡಲೆ ಪ್ರತಿಮೆ ಮರುಸ್ಥಾಪಿಸಲು ಅಖಿಲ ಕೊಡವ ಸಮಾಜ ಒತ್ತಾಯ

ದೇಶ ಕಂಡ ಅಪ್ರತಿಮ ವೀರ ಸೇನಾನಿ, ಈ ನಾಡಿನ ಕಣ್ಮಣಿ ಜನರಲ್ ಕೊಡಂದೇರ ಎಸ್ ತಿಮ್ಮಯ್ಯನವರ ಪುತ್ಥಳಿ ವಿಘ್ನಗೊಳ್ಳುವ ಮೂಲಕ ಲಕ್ಷಾಂತರ ಅಭಿಮಾನಿಗಳ ಹೃದಯಕ್ಕೆ ನೋವಾಗಿದೆ, ಪ್ರತಿಮೆ ಮರುಸ್ಥಾಪನೆಗೆ ಹೆಚ್ಚಿನ ಕಾಲಾವಕಾಶ ತೆಗೆದು ಕೊಳ್ಳದೆ ಕೂಡಲೇ ಇದೇ ಜಾಗದಲ್ಲಿ ಜನರಲ್ ಕೆ.ಎಸ್ ತಿಮ್ಮಯ್ಯನವರ ಪುತ್ಥಳಿ ಪುನರ್ನಿರ್ಮಾಣ ಮಾಡುವ ಮೂಲಕ ತಿಮ್ಮಯ್ಯ ವೃತ್ತವನ್ನು ಹೊಸ ವಿನ್ಯಾಸದೊಂದಿಗೆ ಮರುನಾಮಕರಣ ಮಾಡಬೇಕು ಎಂದು ಅಖಿಲ ಕೊಡವ ಸಮಾಜ ಹಾಗೂ ಅದರ ಅಂಗಸಂಸ್ಥೆಗಳು ಒತ್ತಾಯಿಸಿದೆ.

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

ಈ ಕುರಿತು ಜಂಟಿ ಹೇಳಿಕೆ ಬಿಡುಗಡೆ ಮಾಡಿರುವ ಅಖಿಲ ಕೊಡವ ಸಮಾಜ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ, ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ಅಧ್ಯಕ್ಷೆ ಬಾಚರಣಿಯಂಡ ರಾಣು ಅಪ್ಪಣ್ಣ ಹಾಗೂ ಅಖಿಲ ಕೊಡವ ಸಮಾಜ ಯೂತ್ ವಿಂಗ್ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸುತ್ತಾ ಇದರ ಸತ್ಯಾಸತ್ಯತೆಯ ಬಗ್ಗೆ ಸರಿಯಾದ ರೀತಿಯಲ್ಲಿ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಕೆ ಎಸ್ ಆರ್ ಟಿ ಬಸ್ ಇರಲಿ ಅಥವಾ ಬೇರೆ ಯಾವುದೇ ವಾಹನಗಳೇ ಇರಲಿ ಈ ಜಾಗದಲ್ಲಿ ವೇಗದ ಮಿತಿಯನ್ನು ನಿಯಂತ್ರಣಗೊಳಿಸಬೇಕು, ಇಲ್ಲಿ ಮೇಲ್ನೋಟಕ್ಕೆ ಚಾಲಕನ ಅಜಾಗರೂಕತೆ ಎದ್ದು ಕಾಣುತ್ತಿದೆ, ಈ ವೃತ್ತಕ್ಕೆ ನಾಲ್ಕೈದು ಭಾಗದಿಂದ ವಾಹನಗಳು ಬಂದು ಸೇರುವ ಮುಖ್ಯ ವೃತ್ತವಾಗಿದ್ದು ಇಲ್ಲಿ ವೇಗದ ಮಿತಿಯನ್ನು ನಿಯಂತ್ರಣಗೊಳಿಸಬೇಕಿತ್ತು, ಚಾಲಕ ಏನಾದರೂ ಅಜಾಗರೂಕತೆಯಿಂದ ವಾಹನ ಚಾಲಿಸಿದ್ದರೆ ಆತನ ಮೇಲೆ ಕ್ರಮ ಜರುಗಿಸುವಂತಾಗಬೇಕು ಎಂದು ಒತ್ತಾಯಿಸಿದೆ.

ಮಡಿಕೇರಿ ಹೃದಯ ಭಾಗದಲ್ಲಿರುವ ಜನರಲ್ ತಿಮ್ಮಯ್ಯ ವೃತ್ತ ಮಡಿಕೇರಿ ನಗರದ ಮುಕುಟವಿದ್ದಂತೆ, ತಿಮ್ಮಯ್ಯನವರ ಪ್ರತಿಮೆ ಇಲ್ಲದ ಮಡಿಕೇರಿಯನ್ನು ಊಹಿಸಲು ಅಸಾಧ್ಯ. ಪ್ರತಿಮೆ ಸ್ಥಾಪನೆಯಾಗಿ 50 ವರ್ಷ ತುಂಬುವ ಹೊತ್ತಿನಲ್ಲಿಯೇ ಈ ರೀತಿಯ ದುರ್ಘಟನೆ ನಡೆದಿರುವುದು ತುಂಬಾ ನೋವು ತಂದಿದೆ. ಯಾವುದೇ ಕಾರಣಕ್ಕೂ ಪ್ರತಿಮೆಯ ಜಾಗವನ್ನು ಆದಲು ಬದಲು ಮಾಡದೆ ಇದೇ ಜಾಗದಲ್ಲಿ ಕೂಡಲೆ ಇನ್ನಷ್ಟು ಸುಂದರವಾಗಿ ವೃತ್ತವನ್ನು ನಿರ್ಮಿಸಿ ಪ್ರತಿಮೆಯನ್ನು ಅನಾವರಣ ಮಾಡಬೇಕಿದೆ. ಹೆಚ್ಚಿನ ಕಾಲಾವಕಾಶ ತೆಗೆದುಕೊಳ್ಳದೆ ಸರ್ಕಾರ ಕೂಡಲೆ ಇದಕ್ಕೆ ಬೇಕಾಗಿರುವ ಆರ್ಥಿಕ ಮೂಲವನ್ನು ಬಿಡುಗಡೆ ಮಾಡುವ ಮೂಲಕ ವೃತ್ತ ಪುನರ್ನಿರ್ಮಾಣ ಮಾಡುವ ಮೂಲಕ ಪ್ರತಿಮೆ ನಿರ್ಮಾಣದ 50 ವರ್ಷದ ಸಂಭ್ರಮವನ್ನು ಅದ್ಧೂರಿಯಿಂದ ಮಾಡಬೇಕಿದೆ. ಪ್ರತಿಮೆ ಮರುಸ್ಥಾಪನೆಗೆ ಮೀನಾಮೇಷ ಎಣಿಸಿದಲ್ಲಿ ಎಲ್ಲಾ ಜನಾಂಗವನ್ನು ಒಗ್ಗೂಡಿಸಿ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಸರ್ಚ್‌ ಕೂರ್ಗ್‌ ಮೀಡಿಯಾ

"ಸರ್ಚ್‌ ಕೂರ್ಗ್‌ ಮೀಡಿಯಾ" ವಿಶ್ಲೇಷಣಾತ್ಮಕ ಪತ್ರಿಕೋದ್ಯಮದಲ್ಲಿ‌ ಕೃಷಿ, ಸಹಕಾರ, ಪರಿಸರ, ವಿಜ್ಞಾನ ಮತ್ತು ಗ್ರಾಮೀಣ ಜೀವನವನ್ನು ಕೇಂದ್ರೀಕರಿಸುವ ಆನ್‌ಲೈನ್‌ ಮಾಧ್ಯಮವಾಗಿ ಅಸಂಖ್ಯ ಚಂದಾದಾರರೊಂದಿಗೆ, ಅತಿದೊಡ್ಡ ಹಾಗೂ ಅತಿ ವಿಸ್ತಾರವಾದ ಕೊಡಗಿನ ಜನಪ್ರಿಯ ಮಾಧ್ಯಮವಾಗಿದೆ. www.searchcoorg.com  ಹಾಗೂ Search Coorg App ಮುಖಾಂತರ ಕಾರ್ಯನಿರ್ವಹಿಸುತ್ತಿದೆ.

About ಸರ್ಚ್‌ ಕೂರ್ಗ್‌ ಮೀಡಿಯಾ

"ಸರ್ಚ್‌ ಕೂರ್ಗ್‌ ಮೀಡಿಯಾ" ವಿಶ್ಲೇಷಣಾತ್ಮಕ ಪತ್ರಿಕೋದ್ಯಮದಲ್ಲಿ‌ ಕೃಷಿ, ಸಹಕಾರ, ಪರಿಸರ, ವಿಜ್ಞಾನ ಮತ್ತು ಗ್ರಾಮೀಣ ಜೀವನವನ್ನು ಕೇಂದ್ರೀಕರಿಸುವ ಆನ್‌ಲೈನ್‌ ಮಾಧ್ಯಮವಾಗಿ ಅಸಂಖ್ಯ ಚಂದಾದಾರರೊಂದಿಗೆ, ಅತಿದೊಡ್ಡ ಹಾಗೂ ಅತಿ ವಿಸ್ತಾರವಾದ ಕೊಡಗಿನ ಜನಪ್ರಿಯ ಮಾಧ್ಯಮವಾಗಿದೆ. www.searchcoorg.com  ಹಾಗೂ Search Coorg App ಮುಖಾಂತರ ಕಾರ್ಯನಿರ್ವಹಿಸುತ್ತಿದೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments