ನಾಪೋಕ್ಲು ಕರ್ನಾಟಕ ಪಬ್ಲಿಕ್ ಪದವಿ ಪೂರ್ವ ಕಾಲೇಜಿನಲ್ಲಿ ಫ್ರೆಷರ್ಸ್ ಡೇ ಕಾರ್ಯಕ್ರಮ

ಕಠಿಣ ಪರಿಶ್ರಮದಿಂದ ಜೀವನದಲ್ಲಿ ಯಶಸ್ಸು ಸಾಧ್ಯ – ಎಂ.ಎಸ್ ಸಲೀಂ ಸಲಹೆ

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

ನಾಪೋಕ್ಲು: ವಿದ್ಯಾರ್ಥಿ ಜೀವನದಲ್ಲಿ ನಿರ್ದಿಷ್ಟ ಗುರಿಯನ್ನಿಟ್ಟು ಕಠಿಣ ಪರಿಶ್ರಮ ಪಟ್ಟರೆ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಹುದಾ ಪಬ್ಲಿಕ್ ಶಾಲೆಯ ನಿರ್ದೇಶಕರಾದ ಎಂ.ಎಸ್ ಸಲೀಂ ಹೇಳಿದರು.

ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯ ಪದವಿ ಪೂರ್ವ ವಿಭಾಗದ ಪ್ರಥಮ ಪಿಯುಸಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ನಡೆದ ಫ್ರೆಷರ್ಸ್ ಡೇ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡದೆ ನಿರಂತರ ಯಶಸ್ವಿನ ಕನಸು ಕಾಣುತ್ತಿರಬೇಕು.ಒಬ್ಬ ವಿದ್ಯಾರ್ಥಿ ದುಶ್ಚಟಕ್ಕೆ ಬಲಿಯಾದರೆ ಇಡೀ ಸಮಾಜಕ್ಕೆ ಅದರ ದುಷ್ಪರಿಣಾಮಬೀರುತ್ತದೆ,ಅದೇ ರೀತಿಯ ಒಬ್ಬ ವಿದ್ಯಾರ್ಥಿ ಉತ್ತಮ ವ್ಯಕ್ತಿಯಾದರೆ ಸಮಾಜಕ್ಕೂ ಅವನಿಂದ ಒಳಿತಾಗುತ್ತದೆ.
ಭವಿಷ್ಯ ಉಜ್ವಲವಾಗಲು ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೆ ಶಿಸ್ತು ಸಮಯ ಪಾಲನೆ ಮೈಗೂಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಕಾನೂನು ಪಾಲನೆಯ ಬಗ್ಗೆ ವಿವರಿಸಿ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಶಿಸ್ತಿನ ಸಿಪಾಯಿಗಳಾಗಿ ಶಿಕ್ಷಕರಿಗೆ, ಹಿರಿಯರಿಗೆ ಗೌರವ ಕೊಟ್ಟು ಉನ್ನತ ಶಿಕ್ಷಣ ಪಡೆದು ಉನ್ನತ ಸ್ಥಾನಕ್ಕೇರಿ ದೇಶಕ್ಕೆ ಉತ್ತಮ ಪ್ರಜೆಯಾಗಿ ಶಾಲೆಗೂ, ಶಿಕ್ಷಕರಿಗೂ ಪೋಷಕರಿಗೂ ಕೀರ್ತಿಯನ್ನು ತರುವಂತ್ತಾಗಬೇಕೆಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಉಪಾಧ್ಯಕ್ಷ ಕೆ.ಎ. ಹಾರಿಸ್ ಹಿರಿಯ ವಿದ್ಯಾರ್ಥಿಗಳ ನಡತೆ ಕಿರಿಯ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕಾಗಿದೆ. ಈ ದಿನದ ಕಾರ್ಯಕ್ರಮದ ಇಬ್ಬರು ಮುಖ್ಯ ಅತಿಥಿಗಳು ಅವರ ಕಠಿಣ ಪರಿಶ್ರಮದ ಫಲವೇ ಅವರನ್ನು ಈ ಮಟ್ಟಕ್ಕೆ ಬೆಳೆಸಿ ಮತ್ತು ಈ ದಿನದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಹ್ವಾನಿಸಲಾಗಿದೆ. ಅವರಂತೆ ನೀವು ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಸಂಯಮ ಮೈಗೂಡಿಸಿಕೊಂಡು ಉತ್ತಮ ಶಿಕ್ಷಣ ಪಡೆದು ಜೀವನದಲ್ಲಿ ಉನ್ನತ ಸ್ಥಾನಕ್ಕೇರಲು ಪ್ರಯತ್ನಿಸಬೇಕೆಂದರು.

ಸಂಸ್ಥೆಯ ಪ್ರಭಾರ ಪ್ರಾಂಶುಪಾಲೆ ವಿಜಿತ, ಉಪ ಪ್ರಾಂಶುಪಾಲರಾದ ಶಿವಣ್ಣ ಪ್ರಾಸ್ತಾವಿಕ ನುಡಿಗಳನ್ನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಎಂ.ಎಸ್ ಸಲೀಂ, ಮತ್ತು ಠಾಣಾಧಿಕಾರಿ ಮಂಜುನಾಥ್ ಅವರನ್ನು
ಶಾಲು ಹೋದಿಸಿ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಎಸ್‌ ಡಿಎಂಸಿ ಸದಸ್ಯರಾದ ಬೊಳ್ಳೆಪಂಡ ಹರೀಶ್, ಎನ್ ಟಿ ಮುತ್ತಪ್ಪ, ಮುಜೀಬ್, ರಾಜೇಶ್,ಸಂಸ್ಥೆಯ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ನಡೆದ ವಿದ್ಯಾರ್ಥಿಗಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರನ್ನು ರಂಜಿಸಿತು.

ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಅಜ್ಮಿಯ,ಅಮೂಲ್ಯ ನಿರೂಪಿಸಿದರು. ವಿದ್ಯಾರ್ಥಿ ಮಹಮ್ಮದ್ ಶಜೀರ್ ಸ್ವಾಗತಿಸಿ, ರಂಶಾದ್ ವಂದಿಸಿದರು.

ವರದಿ :ಝಕರಿಯ ನಾಪೋಕ್ಲು

0 0 votes
Article Rating
Subscribe
Notify of
guest
0 Comments
Inline Feedbacks
View all comments