ಹೊದ್ದೂರು ಗ್ರಾಮ ಪಂಚಾಯಿತಿ ವತಿಯಿಂದ “ಸ್ವಚ್ಟತಾ ಇ – ಸೇವಾ” ಅಭಿಯಾನದ ಭಾಗವಾಗಿ ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವು ನಾಳೆ ಅಂದರೆ ದಿನಾಂಕ:05.10.2023 ಗುರುವಾರ ಜರುಗಲಿದೆ. ಈ ನಿಟ್ಟಿನಲ್ಲಿ ಇಂದು ಪಂಚಾಯತಿಯ ಸಭಾಂಗಣದಲ್ಲಿ ಸ್ವಚ್ಛತಾ ಇ ಸೇವಾ ಟಿ ಶರ್ಟ್ ಅನ್ನು
ಬಿಡುಗಡೆ ಮಾಡಲಾಯುತು. ವಿಶೇಷವಾಗಿ ಹೊದ್ದೂರು ಪಂಚಾಯತಿ ವ್ಯಾಪ್ತಿಯ ಕಾವೇರಿ ನದಿ ತೀರದಲ್ಲಿ ಈ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ.
ಬೋಳಿಬಾಣೆ ರಸ್ತೆ, ಕೊಟ್ಟಮುಡಿ ಭಾಗದಲ್ಲಿ ತ್ಯಾಜ್ಯ ವಸ್ತುಗಳನ್ನು ಬಿಸಾಡುವುದರಿಂದ ನದಿನೀರು ಮಲಿನಗೊಂಡು ಗ್ರಾಮದ ಸ್ವಚ್ಛತೆಗೆ ಹಾಗೂ ಜಲಮೂಲಗಳು ಕಲುಷಿತಗೊಳ್ಳುವ ಹಿನ್ನೆಲೆಯಲ್ಲಿ ಹೊದ್ದೂರು ಗ್ರಾಮ ಪಂಚಾಯಿತಿ ವತಿಯಿಂದ ಈ ಬೃಹತ್ ಸ್ವಚ್ಛತಾ ಅಭಿಯಾನವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಹೆಚ್.ಎ.ಹಂಸ ಹಾಗೂ ಉಪಾಧ್ಯಕ್ಷರು ಮತ್ತು ಆಡಳಿತ ಮಂಡಳಿ ಸರ್ವ ಸದಸ್ಯರ ನೇತೃತ್ವದಲ್ಲಿ ನಡೆಯಲಿದೆ.
ಈ ಸ್ವಚ್ಟತಾ ಅಭಿಯಾನವನ್ನು ಗ್ರಾಮದ ಸಂಜೀವಿನಿ ಮಹಿಳಾ ಒಕ್ಕೂಟ, ಯುವಕ ಸಂಘಗಳು, ವಿವಿಧ ಸಂಘ-ಸಂಸ್ಥೆಗಳು ಮತ್ತು ಗ್ರಾಮಸ್ಥರ ಸಹಕಾರದೊಂದಿಗೆ ಆಯೋಜಿಸಲಾಗಿದೆ. ದಸರಾ ಹಾಗೂ ಕಾವೇರಿ ಸಂಕ್ರಮಣ ಹಿನ್ನೆಲೆಯಲ್ಲಿ ಕಾವೇರಿ ನದಿ ಕಲುಷಿತಗೊಳ್ಳದಂತೆ ಕಾಪಾಡಲು, ಈ ಸ್ವಚ್ಟತಾ ಅಭಿಯಾನಕ್ಕೆ ಸರ್ವರ ಸಹಕಾರವನ್ನು ಗ್ರಾಮ ಪಂಚಾಯಿತಿಯ ಆಡಳಿತ ಮಂಡಳಿ ಈ ಮೂಲಕ ಕೋರಿದೆ.