ನಾಪೋಕ್ಲು ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕೇಟೋಳಿರ ಹರೀಶ್ ಪೂವಯ್ಯ ಆಯ್ಕೆ

Reading Time: < 1 minute

ನಾಪೋಕ್ಲು : ನಾಪೋಕ್ಲು ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಕೇಟೋಳಿರ ಹರೀಶ್ ಪೂವಯ್ಯ, ಉಪಾಧ್ಯಕ್ಷರಾಗಿ ಕುಂದ್ಯೋಳಂಡ ಕವಿತಾ ಮುತ್ತಣ್ಣ ಆಯ್ಕೆಯಾಗಿದ್ದಾರೆ.

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/Ln5WiyAJxApLbTxD0ttgcU ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

ಸಂಘದ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಮುಂದಿನ 5 ವರ್ಷದ ಆಡಳಿತ ಮಂಡಳಿ ಅವಧಿಗೆ ಬಿಜೆಪಿ ಬೆಂಬಲಿತ 13 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಅರೆಯಡ ರತ್ನಪೆಮ್ಮಯ್ಯ, ಚಿಯಕಪೂವಂಡ ಸತೀಶ್ ದೇವಯ್ಯ,ಚೋಕಿರ ಪ್ರಭು ಪೂವಪ್ಪ, ಕುಂದ್ಯೋಳಂಡ ವಿಶು ಪೂವಯ್ಯ,ಕೇಲೆಟಿರ ಮಾಲ ಮುತ್ತಮ್ಮ,ಅಪ್ಪಚ್ಚಿರ ರೀನಾ ನಾಣಯ್ಯ,ಚೋಕಿರ ಸಜಿತ್ ಚಿಣ್ಣಪ್ಪ,ತೀಯರ ಎ. ಮಿಟ್ಟು, ಹರಿಜನರ ಎ. ಬೊಳ್ಳು,ಪುಷ್ಪ ಕೃಷ್ಣಪ್ಪ ಆಯ್ಕೆಯಾಗಿದ್ದಾರೆ.

ಚುನಾವಣಾ ಅಧಿಕಾರಿಯಾಗಿ ಕಕ್ಕಬ್ಬೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಶೋಕ್ ಕುಮಾರ್ ಕಾರ್ಯನಿರ್ವಹಿಸಿದರು.

ವರದಿ: ಝಕರಿಯ ನಾಪೋಕ್ಲು

ಹಂಚಿಕೊಳ್ಳಿ
0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments
error: Content is protected !!
0
Would love your thoughts, please comment.x
()
x