ಅ.18 ರಂದು ಶ್ರೀ ಕಾವೇರಿ ತೀರ್ಥ ವಿತರಣಾ ರಥಯಾತ್ರೆ

ಮಡಿಕೇರಿ,11: ಮಡಿಕೇರಿ ನಗರದ ಮ್ಯಾನ್ಸ್‌ ಕಾಂಪೌಂಡ್‌ ಬಳಿಯಿರುವ ಶ್ರೀ ಕಾವೇರಿ ಭಕ್ತ ಮಂಡಳಿ(ರಿ) ಇದರ ವತಿಯಿಂದ 69ನೇ ವರ್ಷದ ಶ್ರೀ ಕಾವೇರಿ ತೀರ್ಥ ವಿತರಣಾ ರಥಯಾತ್ರೆಯು ಅಕ್ಟೋಬರ್‌ 18ರಂದು ನೇರವೇರಲಿದೆ.

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

ಅಂದು ಬೆಳ್ಳಿಗೆ 7 ಗಂಟೆಗೆ ಗಣಪತಿ ಹೋಮದೊಂದಿಗೆ ಪ್ರಾರಂಭಗೊಂಡು ಶ್ರೀ ಕಾವೇರಿ ಮಾತೆಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜಾ ಕೈಂಕರ್ಯಗಳು ಜರುಗಲಿದೆ. 12 ಗಂಟೆಗೆ ಅನ್ನದಾನದ ನಂತರ ಮಧ್ಯಾಹ್ನ ಶ್ರೀ ಕಾವೇರಿ ತೀರ್ಥ ವಿತರಣಾ ರಥಯಾತ್ರೆಯು ಮ್ಯಾನ್ಸ್‌ ಕಾಂಪೌಂಡ್‌ ಬಳಿಯಿಂದ ಹೊರಟು ಜೂನಿಯರ್‌ ಕಾಲೇಜು ಮಾರ್ಗವಾಗಿ ಓಂಕಾರೇಶ್ವರ ದೇವಾಲಯ, ಜನರಲ್‌ ತಿಮ್ಮಯ್ಯ ವೃತ್ತ, ಶಾಂತಿನಿಕೇತನ, ಮರಳಿ ಜನರಲ್‌ ತಿಮ್ಮಯ್ಯ ವೃತ್ತ, ಗೌಳಿಬೀದಿ, ಕೋಹಿನೂರು ರಸ್ತೆ, ಎಸ್.ಬಿ.ಐ, ಪೇಟೆ ಶ್ರೀ ರಾಮ ಮಂದಿರ, ಚೌಕಿ, ಗಣಪತಿ ಬೀದಿ, ಬನ್ನಿ ಮಂಟಪ, ಮಹದೇವಪೇಟೆ, ಚೌಕಿ, ಸ್ಕ್ವಾಡರ್ನ್‌ ಲೀಡರ್‌ ಅಜ್ಜಮಾಡ ದೇವಯ್ಯ ವೃತ್ತ, ಜೂನಿಯರ್‌ ಕಾಲೇಜು ಮಾರ್ಗವಾಗಿ ಮ್ಯಾನ್ಸ್‌ ಕಾಂಪೌಂಡ್‌ ಬಳಿ ಸಂಪನ್ನ ಗೊಳ್ಳಲಿದೆ.

ಶ್ರೀ ಕಾವೇರಿ ತೀರ್ಥ ವಿತರಣಾ ರಥಯಾತ್ರೆ ಉತ್ಸವದಲ್ಲಿ ಸರ್ವರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಕಾವೇರಿ ಮಾತೆಯ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ಕಾವೇರಿ ಭಕ್ತ ಮಂಡಳಿ(ರಿ) ಇದರ ಅಧ್ಯಕ್ಷರು ಹಾಗೂ ಸಮಿತಿ ಸದಸ್ಯರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About ಸರ್ಚ್‌ ಕೂರ್ಗ್‌ ಮೀಡಿಯಾ

"ಸರ್ಚ್‌ ಕೂರ್ಗ್‌ ಮೀಡಿಯಾ" ವಿಶ್ಲೇಷಣಾತ್ಮಕ ಪತ್ರಿಕೋದ್ಯಮದಲ್ಲಿ‌ ಕೃಷಿ, ಸಹಕಾರ, ಪರಿಸರ, ವಿಜ್ಞಾನ ಮತ್ತು ಗ್ರಾಮೀಣ ಜೀವನವನ್ನು ಕೇಂದ್ರೀಕರಿಸುವ ಆನ್‌ಲೈನ್‌ ಮಾಧ್ಯಮವಾಗಿ ಅಸಂಖ್ಯ ಚಂದಾದಾರರೊಂದಿಗೆ, ಅತಿದೊಡ್ಡ ಹಾಗೂ ಅತಿ ವಿಸ್ತಾರವಾದ ಕೊಡಗಿನ ಜನಪ್ರಿಯ ಮಾಧ್ಯಮವಾಗಿದೆ. www.searchcoorg.com  ಹಾಗೂ Search Coorg App ಮುಖಾಂತರ ಕಾರ್ಯನಿರ್ವಹಿಸುತ್ತಿದೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments