ಹಳ್ಳಿಗಟ್ಟು ಶ್ರೀ ಭದ್ರಕಾಳಿ ದೇವಸ್ಥಾನದ ನಾಗಬನದಲ್ಲಿ ವಿಜೃಂಭಣೆಯಿಂದ ನಡೆದ ಷಷ್ಠಿ ಪೂಜೆ

ಸುಬ್ರಹ್ಮಣ್ಯ ಷಷ್ಠಿ ಅಂಗವಾಗಿ ಸೋಮವಾರ ಹಳ್ಳಿಗಟ್ಟು ಶ್ರೀ ಭದ್ರಕಾಳಿ ದೇವಸ್ಥಾನದಲ್ಲಿ ವಿಶೇಷ ಷಷ್ಠಿ ಪೂಜೆಯನ್ನು ಹಮ್ಮಿಕೊಳ್ಳಲಾಯಿತು. ಇಲ್ಲಿನ ನಾಗ ಬನದಲ್ಲಿ ಪ್ರತಿಷ್ಟಾಪಿಸಲಾಗಿರುವ ನಾಗ ದೇವರಿಗೆ ವಿಶೇಷ ಪೂಜೆ ಹಾಗೂ ವಿವಿಧ ಅಭಿಷೇಕ ಮಾಡುವ ಮೂಲಕ ಭಕ್ತರು ತಮ್ಮ ಹರಕೆಯನ್ನು ಸಲ್ಲಿಸಿದ್ದರು. ದೇವಸ್ಥಾನದ ಆವರಣದಲ್ಲಿ ಸಾಮೂಹಿಕ ಆಶ್ಲೇಷ ಬಲಿ ಪೂಜೆ ಸೇರಿದಂತೆ ವಿವಿಧ ಸೇವೆಗಳನ್ನು ಸಲ್ಲಿಸಲಾಯಿತು. ನಂತರ ಭದ್ರಕಾಳಿ ದೇವಸ್ಥಾನದಲ್ಲಿ ಮಹಾಮಂಗಳಾರತಿಯ ಬಳಿಕ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಊರಿನವರು ಮಾತ್ರವಲ್ಲದೆ ಸುತ್ತಮುತ್ತಲ ಗ್ರಾಮಸ್ಥರು ಹಾಗೂ ಭಕ್ತರು ಷಷ್ಠಿ ಪೂಜೆಯಲ್ಲಿ ಪಾಲ್ಗೊಂಡರು. ಊರು ತಕ್ಕರಾದ ಚಮ್ಮಟೀರ ಕುಟುಂಬಸ್ಥರ ತಕ್ಕಾಮೆಯಲ್ಲಿ ನಡೆದ ಷಷ್ಠಿ ಪೂಜೆಯಲ್ಲಿ ಮೂಕಳೇರ, ಮಚ್ಚಿಯಂಡ, ಚೇಂದಿಮಾಡ, ಕೂಕಂಡ, ಮನೆಯಪಂಡ, ಸಣ್ಣುವಂಡ, ಕೊಳೇರ ಸೇರಿದಂತೆ ಊರಿನ ವಿವಿಧ ಕುಟುಂಬಸ್ಥರು ಮತ್ತು ಗ್ರಾಮ‌ಸ್ಥರು ಹಾಗೂ ಭಕ್ತರು ಭಾಗವಹಿಸಿದ್ದರು. ಇಲ್ಲಿನ ಮುಖ್ಯ ಅರ್ಚಕರಾದ ಸುಬ್ರಮಣ್ಯ ಕೇಕುನ್ನಾಯ ನೇತೃತ್ವದಲ್ಲಿ ಪೂಜಾವಿಧಿ ವಿಧಾನಗಳು ನಡೆಯಿತು.

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

About ಸರ್ಚ್‌ ಕೂರ್ಗ್‌ ಮೀಡಿಯಾ

"ಸರ್ಚ್‌ ಕೂರ್ಗ್‌ ಮೀಡಿಯಾ" ವಿಶ್ಲೇಷಣಾತ್ಮಕ ಪತ್ರಿಕೋದ್ಯಮದಲ್ಲಿ‌ ಕೃಷಿ, ಸಹಕಾರ, ಪರಿಸರ, ವಿಜ್ಞಾನ ಮತ್ತು ಗ್ರಾಮೀಣ ಜೀವನವನ್ನು ಕೇಂದ್ರೀಕರಿಸುವ ಆನ್‌ಲೈನ್‌ ಮಾಧ್ಯಮವಾಗಿ ಅಸಂಖ್ಯ ಚಂದಾದಾರರೊಂದಿಗೆ, ಅತಿದೊಡ್ಡ ಹಾಗೂ ಅತಿ ವಿಸ್ತಾರವಾದ ಕೊಡಗಿನ ಜನಪ್ರಿಯ ಮಾಧ್ಯಮವಾಗಿದೆ. www.searchcoorg.com  ಹಾಗೂ Search Coorg App ಮುಖಾಂತರ ಕಾರ್ಯನಿರ್ವಹಿಸುತ್ತಿದೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments