Reading Time: < 1 minute
ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್ https://chat.whatsapp.com/Ln5WiyAJxApLbTxD0ttgcU ಜೋಯ್ನ್ ಆಗಿ.
ನಮ್ಮ ವಾಟ್ಸಾಪ್ ಚಾನಲ್ ಲಿಂಕ್ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.
ಚೇರಂಬಾಣೆ: ಭಾಗಮಂಡಲ ಸಮೀಪದ ಚೇರಂಬಾಣೆಯ ಅರುಣ ವಿದ್ಯಾ ಸಂಸ್ಥೆಯ ವಾರ್ಷಿಕೋತ್ಸವದ ಅಂಗವಾಗಿ ದಿನಾಂಕ 15.12.2023 ರಂದು ಎಲ್ಲಾ ವಿದ್ಯಾರ್ಥಿಗಳಿಗೆ ಕ್ರೀಡಾಕೂಟ ಏರ್ಪಡಿಸಲಾಗಿತ್ತು.
ಕಾರ್ಯಕ್ರಮವನ್ನು ಬೇಂಗೂರು ಗ್ರಾಮ ಪಂಚಾಯತ್ ಸದಸ್ಯರಾದ ಕೆ.ಎಂ. ಬಶೀರ್ ರವರು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಬೇಕಲ್ ರಮಾನಾತ್ ಕರಿಕೆ ರವರು ಉಪಸ್ಥಿತರಿದ್ದು , ಜೀವನದಲ್ಲಿ ಕ್ರೀಡೆಯಿಂದ ದೊರೆಯುವ ಪ್ರಯೋಜನದ ಬಗ್ಗೆ ತಿಳಿಸಿದರು. ಸಂಸ್ಥೆಯ ಪ್ರಾಂಶುಪಾಲರು, ಮುಖ್ಯ ಶಿಕ್ಷಕರು, ಶಿಕ್ಷಕರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪರಮೇಶ್ ಸ್ವಾಗತಿಸಿ, ರಮೇಶ್ ರವರು ವಂದಿಸಿದರು.ದೈಹಿಕ ಶಿಕ್ಷಕ ಅಯ್ಯಪ್ಪನವರು ವಿದ್ಯಾರ್ಥಿಗಳ ತಂಡವನ್ನು ವ್ಯವಸ್ಥಿತವಾಗಿ ಮುನ್ನಡೆಸಿದ್ದರು.