Reading Time: < 1 minute
ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್ https://chat.whatsapp.com/Ln5WiyAJxApLbTxD0ttgcU ಜೋಯ್ನ್ ಆಗಿ.
ನಮ್ಮ ವಾಟ್ಸಾಪ್ ಚಾನಲ್ ಲಿಂಕ್ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.
ಧರ್ಮಸ್ಥಳ ಸಂಘದ ಸದಸ್ಯರಿಂದ ದೇಗುಲ ಸ್ವಚ್ಛತೆ
ಕಕ್ಕಬ್ಬೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಕ್ಕಬ್ಬೆ ಕಾರ್ಯ ಕ್ಷೇತ್ರದ ಸದಸ್ಯರು ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಸ್ವಚ್ಛತಾ ಶ್ರಮದಾನ ನಡೆಸಿದರು.
ದೇವಾಲಯದ ಕುಡಿಯುವ ನೀರಿನ ಟ್ಯಾಂಕ್ ಹಾಗು ದೇವಾಲಯದ ಆವರಣದ ಸುತ್ತಮುತ್ತಲು ಬೆಳೆದಿದ್ದ ಕುರುಚಲು ಗಿಡಗಂಟಿಗಳನ್ನು ಶ್ರಮದಾನದ ಮೂಲಕ ಸ್ವಚ್ಛಗೊಳಿಸಿದರು.
ಸ್ವಚ್ಛತಾ ಕಾರ್ಯದಲ್ಲಿ ಒಕ್ಕೂಟದ ಅಧ್ಯಕ್ಷೆ ಸರೋಜಿನಿ,ಮಾಜಿ ಅಧ್ಯಕ್ಷ ಮಣಿ, ಸೇವಾಪ್ರತಿನಿಧಿ ಉಮಾಲಕ್ಷ್ಮಿ, ಸದಸ್ಯರಾದ ಬೋಜಕ್ಕಿ, ವೇಣುಗೋಪಾಲ್, ಸೋಜ, ಶರಿನ್ ಸೇರಿದಂತೆ ಸಂಘದ ಎಲ್ಲಾ ಸದಸ್ಯರು ಪಾಲ್ಗೊಂಡಿದ್ದರು.