ನಾಪೋಕ್ಲು ರಾಮಮಂದಿರ ಗಣಪತಿ ದೇವಾಲಯದಲ್ಲಿ ಸ್ವಚ್ಛತಾ ಶ್ರಮದಾನ
ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್ https://chat.whatsapp.com/EicYYbrXCeEBY3KGWiZnRy ಜೋಯ್ನ್ ಆಗಿ.
ನಮ್ಮ ವಾಟ್ಸಾಪ್ ಚಾನಲ್ ಲಿಂಕ್ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.
ದೇವಾಲಯ ಸ್ವಚ್ಛಗೊಳಿಸಿದ ಧರ್ಮಸ್ಥಳ ಸಂಘದ ಸದಸ್ಯರು
ನಾಪೋಕ್ಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಾಪೋಕ್ಲು ಸುಭಾಷ್ ನಗರ ಕಾರ್ಯ ಕ್ಷೇತ್ರದ ಸದಸ್ಯರಿಂದ ಸ್ಥಳೀಯ ರಾಮಮಂದಿರ ಗಣಪತಿ ದೇವಾಲಯದಲ್ಲಿ ಸ್ವಚ್ಛತಾ ಶ್ರಮದಾನ ನಡೆಸಿದರು. ದೇವಾಲಯದ ಆವರಣದ ಸುತ್ತಮುತ್ತಲು ಬೆಳೆದಿದ್ದ ಕುರುಚಲು ಗಿಡಗಂಟಿಗಳನ್ನು ಕಡಿದು ಸ್ವಚ್ಛಗೊಳಿಸಿದರು.
ಸ್ವಚ್ಛತಾ ಕಾರ್ಯದಲ್ಲಿ ಒಕ್ಕೂಟದ ಅಧ್ಯಕ್ಷೆ ಮುತ್ತುರಾಣಿ, ಸೇವಾಪ್ರತಿನಿಧಿ ಉಮಾಲಕ್ಷ್ಮಿ, ಸದಸ್ಯರಾದ ರೇವತಿ, ಸುಶೀಲ, ಹಸೀನಾ, ಪೊನ್ನಮ್ಮ, ಕುಲ್ಸ ಸೇರಿದಂತೆ ಸಂಘದ ಎಲ್ಲಾ ಸದಸ್ಯರು ಪಾಲ್ಗೊಂಡಿದ್ದರು.