ಚೆಯ್ಯಂಡಾಣೆಯಲ್ಲಿ ಜೆಜೆಎಂ ಕಾಮಗಾರಿ ಪೂರ್ಣ-ದೊರಕದ ನೀರು -ಲೋಕಾಯುಕ್ತಕ್ಕೆ ದೂರು ರಾಜೇಶ್ ಅಚ್ಚಯ್ಯ

ಚೆಯ್ಯ0ಡಾಣೆ: ಸ್ಥಳೀಯ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಲಜೀವನ್ ಮಿಷನ್ (ಜೆಜೆಎಂ) ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಚೆಸ್ಕಾಂ ನಿರ್ಲಕ್ಷ್ಯದಿಂದ ನೀರು ದೊರೆಯುತ್ತಿಲ್ಲ ಎಂದು ಗ್ರಾಮ ಪಂಚಾಯಿತಿ ನಿಕಟ ಪೂರ್ವ ಅಧ್ಯಕ್ಷ ರಾಜೇಶ್ ಅಚ್ಚಯ್ಯ ಆರೋಪಿಸಿದ್ದು, ಲೋಕಾಯುಕ್ತಕ್ಕೆ ದೂರು ನೀಡಲು ಮುಂದಾಗಿದ್ದಾರೆ.

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ರಾಜೇಶ್ ಅಚ್ಚಯ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜೆಜೆಎಂ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಟ್ರಾನ್ಸ್ಫಾರ್ಮರ್ ಆಳವಡಿಸಿದ್ದು, ಮೀಟರ್ ಕೂಡ ಅಳವಡಿಸಲಾಗಿದೆ. ಆದರೆ ಚೆಸ್ಕಾಂ ನಿರ್ಲಕ್ಷ್ಯತೋರಿ ಪವರ್ ಸಪ್ಲೈ ಮಾತ್ರ ನೀಡುತ್ತಿಲ್ಲ,ಈ ಬಗ್ಗೆ ಮಾನ್ಯ ಶಾಸಕರ ಗಮನಕ್ಕೆ ತಂದ ಸಂದರ್ಭ ಕೂಡಲೇ ಚೆಸ್ಕಾಂ ಇಲಾಖೆಗೆ ಕ್ರಮ ಕೈಗೊಳ್ಳಲು ಶಾಸಕರು ತಿಳಿಸಿದ್ದರು. ಆದರೂ ಇದುವರೆಗೂ ಯಾವುದೆ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಂಚಾಯತಿ ವ್ಯಾಪ್ತಿಯ ತಟ್ಟಮಕ್ಕಿ ಪೈಸಾರಿಗೆ 15 ದಿನದಿಂದ ನೀರಿಲ್ಲದೆ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಿಂದ ಗ್ರಾಮ ಪಂಚಾಯಿತಿ ಸದಸ್ಯನಾದ ನಾನು ಲೋಕಾಯುಕ್ತಕ್ಕೆ ದೂರು ನೀಡಲು ಮುಂದಾಗಿದ್ದೇನೆ ಎಂದರು.

ಅಶ್ರಫ್, ಚೆಯ್ಯಂಡಾಣೆ

0 0 votes
Article Rating
Subscribe
Notify of
guest
0 Comments
Inline Feedbacks
View all comments