“ಕಾಳುಮೆಣಸಿನಲ್ಲಿ ಸುಸ್ಥಿರ ಮತ್ತು ಭವಿಷ್ಯದ ಉತ್ಪಾದನಾ ಪದ್ದತಿಗಳು” ಎಂಬ ವಿಷಯದ ಬಗ್ಗೆ ನಡೆದ ತರಬೇತಿ ಕಾರ್ಯಕ್ರಮ

“ಕಾಳುಮೆಣಸಿನಲ್ಲಿ ಸುಸ್ಥಿರ ಮತ್ತು ‌

ಭವಿಷ್ಯದ ಉತ್ಪಾದನಾ ಪದ್ದತಿಗಳು” ಎಂಬ ವಿಷಯದ ಬಗ್ಗೆ ನಡೆದ ಒಂದು ದಿನದ ರೈತರ ತರಬೇತಿ ಕಾರ್ಯಕ್ರಮ

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (RKVY-RAFTAAR) ಪ್ರಾಯೋಜಿತ “ಕಾಳುಮೆಣಸಿನಲ್ಲಿ ಸುಸ್ಥಿರ ಮತ್ತು ಭವಿಷ್ಯದ ಉತ್ಪಾದನಾ ಪದ್ದತಿಗಳು” ಎಂಬ ವಿಷಯದ ಬಗ್ಗೆ ಒಂದು ದಿನದ ರೈತರ ತರಬೇತಿ ಕಾರ್ಯಕ್ರಮವನ್ನು ದಿನಾಂಕ 19 ಮಾರ್ಚ್ 2024 ರಂದು ಐ. ಸಿ. ಎ. ಆರ್ – ಭಾರತೀಯ ಸಂಬಾರ ಬೆಳೆಗಳ ಸಂಶೋಧನ ಸಂಸ್ಥೆ, ಪ್ರಾದೇಶಿಕ ಕೇಂದ್ರ, ಅಪ್ಪಂಗಳ, ಮಡಿಕೇರಿಯು ಆಯೋಜಿಸಿತ್ತು.

ತರಬೇತಿ ಕಾರ್ಯಾಗಾರವನ್ನು ಐ.ಸಿ.ಎ.ಆರ್. ಗೀತೆಯೊಂದಿಗೆ ಪ್ರಾರಂಭಿಸಲಾಯಿತು. ಡಾ. ಎಂ. ಎಸ್. ಶಿವಕುಮಾರ್, ವಿಜ್ಞಾನಿಗಳು, ಐ. ಸಿ. ಎ. ಆರ್.-ಐ. ಐ. ಎಸ್. ಆರ್., ಪ್ರಾದೇಶಿಕ ಕೇಂದ್ರ, ಅಪ್ಪಂಗಳ ಇವರು ಸ್ವಾಗತಿಸಿದರು. ಕಾರ್ಯಕ್ರಮವನ್ನು ಶ್ರೀ. ಮೋಹನದಾಸ್, ಜಂಟಿ ನಿರ್ದೇಶಕರು, ಕಾಫಿ ಬೋರ್ಡ್ ಸಮಗ್ರ ಕೃಷಿ ಪದ್ದತಿಗಳನ್ನು ಅಳವಡಿಸಿಕೊಳ್ಳುವ ಅಗತ್ಯ ಮತ್ತು ಆಧುನಿಕ ತಂತ್ರಜ್ಞಾನಗಳ ಬಳಕೆಯ ಆದ್ಯತೆಯನ್ನು ತಿಳಿಸಿದರು. ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದ ಮುಖ್ಯಸ್ಥರಾದ ಡಾ. ರಾಜೇಂದ್ರನ್ ಇವರು ಮಾತನಾಡಿ ಸುಸ್ಥಿರ ಕೃಷಿ ಪದ್ದತಿಗಳ ಅಳವಡಿಕೆಯ ಪ್ರಾಮುಖ್ಯತೆ ಹಾಗೂ ಮಣ್ಣು ಮತ್ತು ನೀರಿನ ಮಾದರಿಗಳ ಪರೀಕ್ಷೆ ಮಾಡಿಸುವುದು ಆಗತ್ಯವೆಂದು ತಿಳಿಸಿದರು.

ಡಾ. ಎಸ್. ಜೆ. ಅಂಕೆಗೌಡ, ಮುಖ್ಯಸ್ಥರು, ಐ. ಸಿ. ಎ. ಆರ್.-ಐ. ಐ. ಎಸ್. ಆರ್., ಪ್ರಾದೇಶಿಕ ಕೇಂದ್ರ, ಅಪ್ಪಂಗಳ, ಮಡಿಕೇರಿ ಇವರು ಮಾತಾನಾಡಿ ಐ. ಐ. ಎಸ್. ಆರ್., ಪ್ರಾದೇಶಿಕ ಕೇಂದ್ರದ ಕಾಳುಮೆಣಸಿನ ಸಂಶೋಧನ ಕಾರ್ಯಗಳ ಬಗ್ಗೆ ಮತ್ತು ಕರ್ನಾಟಕದಲ್ಲಿ ಕಾಳುಮೆಣಸಿನ ಉತ್ಪಾದನೆಯ ಬಗ್ಗೆ ಮಾಹಿತಿ ನೀಡಿದರು.

ತರಬೇತಿ ಕಾರ್ಯಾಗಾರದಲ್ಲಿ ಕಾಳುಮೆಣಸಿನ ತಳಿ ವೈವಿಧ್ಯತೆ, ಗುಣಮಟ್ಟದ ಸಸ್ಯಾಭಿವೃದ್ದಿ ವಿಧಾನಗಳು, ವೈಜ್ಞಾನಿಕ ಕೃಷಿ ಪದ್ಧತಿಗಳು, ರೋಗ ಮತ್ತು ಕೀಟ ನಿರ್ವಹಣೆ ಬಗ್ಗೆ ಐ.ಸಿ.ಎ.ಆರ್.-ಐ.ಐ.ಎಸ್.ಆರ್, ಪ್ರಾದೇಶಿಕ ಕೇಂದ್ರದ ವಿಜ್ಞಾನಿಗಳು ಮಾಹಿತಿ ನೀಡಿದರು. ಡಾ. ಹೊನ್ನಪ್ಪ ಆಸಂಗಿ, ವಿಜ್ಞಾನಿಗಳು, ಐ. ಸಿ. ಎ. ಆರ್.-ಐ. ಐ. ಎಸ್. ಆರ್., ಪ್ರಾದೇಶಿಕ ಕೇಂದ್ರ, ಇವರು ವಂದಿಸಿದರು. ಈ ತರಬೇತಿಯಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಿಂದ 130 ಕ್ಕೂ ಹೆಚ್ಚು ರೈತರು ಪಾಲ್ಗೊಂಡಿದ್ದರು.

ಸರ್ಚ್‌ ಕೂರ್ಗ್‌ ಮೀಡಿಯಾ

"ಸರ್ಚ್‌ ಕೂರ್ಗ್‌ ಮೀಡಿಯಾ" ವಿಶ್ಲೇಷಣಾತ್ಮಕ ಪತ್ರಿಕೋದ್ಯಮದಲ್ಲಿ‌ ಕೃಷಿ, ಸಹಕಾರ, ಪರಿಸರ, ವಿಜ್ಞಾನ ಮತ್ತು ಗ್ರಾಮೀಣ ಜೀವನವನ್ನು ಕೇಂದ್ರೀಕರಿಸುವ ಆನ್‌ಲೈನ್‌ ಮಾಧ್ಯಮವಾಗಿ ಅಸಂಖ್ಯ ಚಂದಾದಾರರೊಂದಿಗೆ, ಅತಿದೊಡ್ಡ ಹಾಗೂ ಅತಿ ವಿಸ್ತಾರವಾದ ಕೊಡಗಿನ ಜನಪ್ರಿಯ ಮಾಧ್ಯಮವಾಗಿದೆ. www.searchcoorg.com  ಹಾಗೂ Search Coorg App ಮುಖಾಂತರ ಕಾರ್ಯನಿರ್ವಹಿಸುತ್ತಿದೆ.

About ಸರ್ಚ್‌ ಕೂರ್ಗ್‌ ಮೀಡಿಯಾ

"ಸರ್ಚ್‌ ಕೂರ್ಗ್‌ ಮೀಡಿಯಾ" ವಿಶ್ಲೇಷಣಾತ್ಮಕ ಪತ್ರಿಕೋದ್ಯಮದಲ್ಲಿ‌ ಕೃಷಿ, ಸಹಕಾರ, ಪರಿಸರ, ವಿಜ್ಞಾನ ಮತ್ತು ಗ್ರಾಮೀಣ ಜೀವನವನ್ನು ಕೇಂದ್ರೀಕರಿಸುವ ಆನ್‌ಲೈನ್‌ ಮಾಧ್ಯಮವಾಗಿ ಅಸಂಖ್ಯ ಚಂದಾದಾರರೊಂದಿಗೆ, ಅತಿದೊಡ್ಡ ಹಾಗೂ ಅತಿ ವಿಸ್ತಾರವಾದ ಕೊಡಗಿನ ಜನಪ್ರಿಯ ಮಾಧ್ಯಮವಾಗಿದೆ. www.searchcoorg.com  ಹಾಗೂ Search Coorg App ಮುಖಾಂತರ ಕಾರ್ಯನಿರ್ವಹಿಸುತ್ತಿದೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments